Thursday, 26 September 2013

ವಿಶ್ವದ ರಹಸ್ಯ ತ್ರಿವಿಕ್ರಮ - π (Pi)

ಕಳೆದ ಹಲವು ವಾರಗಳಿಂದ ಪರಮಪೂಜ್ಯ ಬಾಪೂರವರ ಪ್ರವಚನಗಳು ಶ್ರೀ ಅನಿರುದ್ಧ ಗುರುಕ್ಷೇತ್ರಮ್ ಮಂತ್ರದಲ್ಲಿರುವ ಅಂಕುರಮಂತ್ರದ ಭಾಗದಲ್ಲಿಯ ಮೂರನೇ ಪದವಾದ  "ಓಂ" ರಾಮವರದಾಯಿನಿ ಶ್ರೀಮಹಿಷಾಸುರಮರ್ದಿನೈ ನಮ: |" ದ ಮೇಲೆ ಆಗುತ್ತಿದೆ.


ಈ ಪ್ರವಚನದಲ್ಲಿ ಬಾಪೂರವರು ನಮಗೆ ಪರಮೇಶ್ವರಿ ಸೂತ್ರ  (algorithms) ಹಾಗು ಶುಭಚಿಹ್ನೆಗಳ ಪರಿಚಯವನ್ನು ಮಾಡಿಕೊಟ್ಟರು. ಈ ಸೂತ್ರದ ಮೂಲಕ ಬಾಪೂರವರು ನಮಗೆ ಸ್ಕಂದಚಿಹ್ನೆ, ಸ್ವಸ್ತಿಕ, ಸೃಷ್ಟಿಯ ಸೂರ್ಯ ಹಾಗು ಚಂದ್ರ, ದೀಪ, ಆರತಿಯಂತಹ ಅನೇಕ algorithms ಗಳ ಬಗ್ಗೆ ವಿಸ್ತಾರವಾಗಿ ಮಾಹಿತಿಯನ್ನು ಹೇಳಿದರು.

ಅದರನಂತರ ಜುಲೈ ತಿಂಗಳಿನಲ್ಲಿ ಬಾಪೂರವರು  ಪ್ರವಚನವನ್ನು ಆರಂಭ ಮಾಡುವ ಮೊದಲು ನಮಗೆ ಹೇಳಿದ್ದರು, "ಇವತ್ತು ನಮಗೆ ವಿಶ್ವದ ಬಹಳ ದೊಡ್ಡ ರಹಸ್ಯವನ್ನು ನೋಡಬೇಕಾಗಿದೆ" ಮತ್ತು ಈ ಪ್ರವಚನದಲ್ಲಿ ಬಾಪೂರವರು ಪ್ರಶ್ನೆ ಕೇಳಿದ್ದರು, ಗಣಿತದಲ್ಲಿರುವ Pi (π) constant (ಸ್ಥಿರಾಂಕ) ಹೇಗೆ ನಿರ್ಮಾಣವಾಯಿತು? ಮತ್ತು ಅದರ ಉತ್ತರ ಕೊಡುವಾಗ ತಿಳಿಸಿ ಹೇಳಿದರು, Pi (π) ಈ ಸ್ಥಿರಾಂಕ ಸೃಷ್ಟಿಯಲ್ಲಿ ಎಂದೂ ಬದಲಾಯಿಸುವುದಿಲ್ಲ ಹಾಗೆಯೇ ಈ ಸ್ಥಿರಾಂಕವೆಂದರೆ ವರ್ತುಳದ ಪರೀಘ ಭಾಗಿಲೆ ವ್ಯಾಸ. ಇದನ್ನು ಹೇಳುವಾಗ ಹನುಮಂತನೊಡನೆ ಇದರ ಸಂಬಂಧ ಹೇಗಿದೆ, ಹನುಮಂತನ ಈ ವರ್ತುಳದ ಸಂಬಂಧ ಹೇಗಾಗಿರುವುದನ್ನು ವಿವರಿಸುವಾಗ ಶ್ರೀಮಾರುತಿ ಸ್ತ್ರೋತ್ರದ" ಬ್ರಹ್ಮಾಂಡಭೋವತೆ ವೇಢೆ ವಜ್ರ ಪುಚ್ಛೆ ಕರು ಶಕೆ " ಈ ಸಾಲಿನ ಉಲ್ಲೇಖ ಮಾಡಿ ತಿಳಿಸಿದರು.  ಅದರ ನಂತರ ಈ ವರ್ತುಳಾಕೃತಿಯಾದ ಬ್ರಹ್ಮಾಂಡಕ್ಕೆ ಹನುಮಂತನ ಬೀಲದ ಸುತ್ತು ಹೇಗೆ ಚಿರಕಾಲದತನಕ ಇರುವುದನ್ನು ಕೂಡ ಬಾಪೂ ಸ್ಪಷ್ಟ ಮಾಡಿದರು.

ಹಿಂದೆ ಮಾಡಿರುವ ಪ್ರವಚನದಲ್ಲಿ ಅಂದರೆ ೮ ಆಗಷ್ಟ್ ೨೦೧೩ ರ ಪ್ರವಚನದಲ್ಲಿ ಬಾಪೂರವರು Pi (π) ಸ್ಥಿರಾಂಕದ ಮುನ್ನೂರ ಅರವತ್ತು ದಶಾಂಶದ ತನಕ ಬೆಲೆಯನ್ನು ತೋರಿಸಿಕೊಟ್ಟರು. ಈ ಬೆಲೆಯನ್ನು ಐದು-ಐದರ ಭಾಗ (set) ದಲ್ಲಿ ತೋರಿಸಿ ಅದು ಐದು-ಐದರ ಸೆಟ್ಟಿನಲ್ಲಿ ಯಾಕಿರುವುದನ್ನು ವಿಶದ ಮಾಡಿದರು.

ಆದರೆ ಅನೇಕರ ತಪ್ಪು ಕಲ್ಪನೆಯಿರುವುದೇನೆಂದರೆ ೨೨/೭ ಇದು Pi (π)  ಅದರ ಸರಿಯಾದ ಬೆಲೆ (exact value) ಆಗಿರುವದು. ಆದರೆ ಅದು ಹಾಗಿರದೆ  Pi (π) ಒಂದು ಸ್ಥಿರಾಂಕವಾಗಿದೆ. ’Pi or Π is an irrational number, which means that it cannot be expressed exactly as a ratio of any two integers. Fractions such as 22/7 are commonly used as an approximation of Π; no fraction can be its exact value.’ ಗಣಿತಜ್ನರು ಇಷ್ಟರವರೆಗೆ ದಶಾಂಶ ಚಿಹ್ನೆಯ ಮುಂದೆ ಐದು ದಶಲಕ್ಷ ಅಂಕೆಯ ತನಕ Pi (π) ಅದರ ಬೆಲೆಯನ್ನು ಕಂಡುಹಿಡಿದಿದ್ದಾರೆ.

ಭಾರತೀಯ ಅಧ್ಯಾತ್ಮ ಶಾಸ್ತ್ರದಲ್ಲಿ  Pi (π) ಈ ಸಂಜ್ನೆಯನ್ನು ತ್ರಿಪುರಾರಿ ತ್ರಿವಿಕ್ರಮ ಚಿಹ್ನೆಯಿಂದ ತೋರಿಸಲಾಗುತ್ತಿದೆ ಎಂದು ಬಾಪೂರವರು ವಿಶದ ಮಾಡಿದರು. ಇದನ್ನು ಹೇಳುವಾಗ ಬಾಪೂರವರು ಮುಂದೆ ಹೇಳಿದರು, "ಈ ಬ್ರಹ್ಮಾಂಡದ ಅಂದರೆ ಆದೀಮಾತೆಯು ನಿರ್ಮಾಣ ಮಾಡಿರುವ ವಿಶ್ವದ ವಿಸ್ತಾರವು ಸಂತುಲಿತವಾಗಿದೆ. ಅದರ ಮಿತಿ ಅಂದರೆ (ಲಿಮಿಟ್) ಹನುಮಂತನಾಗಿರುವನು. ಆದ್ದರಿಂದಲೇ ಅವನು ಪ್ರಥಮಪುತ್ರ (ದತ್ತಾತ್ರೇಯ ಸ್ವರೂಪ ಶುಭಪ್ರಕಾಶ) ನಾಗಿರುವನು. ಮತ್ತು ಈ ಬ್ರಹ್ಮಾಂಡದ ವ್ಯಾಸವು ಈ ತ್ರಿವಿಕ್ರಮ (ಹರಿಹರ) ಅಂದರೆ ಮಹಾವಿಷ್ನು ಮತ್ತು ಪರಮಶಿವ ಏಕತ್ರಿತವಾಗಿರುವದು; ಶ್ರೀರಾಮ ಮತ್ತು ಹನುಮಂತ ಏಕತ್ರಿತ; ಶೌರ್ಯ ಹಾಗು ಕ್ಷಮೆ ಏಕತ್ರಿತವಾಗಿರುವಂತೆ ಇರುವದು.

೨೨/೭ ಈ ಗಣಿತಸಂಖ್ಯೆಯು  Pi (π) ನ approximation ಅಂದರೆ ಅಂದಾಜು ಹಾಕಿದ ಬೆಲೆಯಾಗಿರುವದು ಅಂದರೆ ಭೌತಿಕ ಜಗತ್ತಿನ ಸಾಮಾನ್ಯ ಗಣಿತದಲ್ಲಿ ಅದನ್ನು ಈ ಪದ್ಧತಿಯಲ್ಲಿ ಉಪಯೋಗ ಮಾಡಲಾಗುವದು.

ಬಾಪೂರವರು ಹೇಳಿದ ಪ್ರಕಾರ ತ್ರಿವಿಕ್ರಮವು ಅನಂತನಾಗಿರುವುದರಿಂದ Pi (π) ಗಣಿತಸಂಜ್ನೆಯ exact ಬೆಲೆಯನ್ನು ತೆಗೆಯಲು ಅಸಾಧ್ಯವಾಗಿದೆ.

Friday, 13 September 2013

ಯೂ ಟ್ಯೂಬ್ ವಿಡಿಯೋ ಚ್ಯಾನೆಲ್ - ಅನಿರುದ್ಧಾ ಪ್ರೇಮಸಾಗರದ ಪ್ರಸಾರಣೆ

ಇವತ್ತು ನಾವು ಅನಿರುದ್ಧ ಪ್ರೇಮಸಾಗರದ ಹೆಸರಿನಲ್ಲಿ (http://www.youtube.com/watch?v=iWnOGGfHRRQ) ಯೂ ಟ್ಯೂಬ್ ವಿಡಿಯೋ ಚ್ಯಾನೆಲಿನ ಸ್ವತಂತ್ರರಿತ್ಯವಾಗಿ ಪ್ರಸಾರಣೆಯನ್ನು ಮಾಡುತ್ತಿರುವುದನ್ನು ತಿಳಿಸಲು ನನಗೆ ಬಹಳ ಆನಂದವಾಗುತ್ತಿದೆ. ನೀವು ಕೇವಲ ಯೂ ಟ್ಯೂಬಿನ ಹೆಸರನ್ನು ಹುಡುಕಿದರೆ ಅದನ್ನು ನೀವು ನೋಡಬಹುದು. ಈ ಚ್ಯಾನೆಲಿನ ಮೂಲಕ ಮೊದಲ ಬಾರಿಗೆ ಪ್ರಕಟವಾದ ವಿಡಿಯೋಗಳನ್ನು ಕೆಳಗೆ ಕೊಡಲಾಗಿದೆ.




ಅನಿರುದ್ಧ ಪ್ರೇಮಸಾಗರದ ಈ ಚ್ಯಾನೆಲ್ ಶ್ರದ್ಧಾವಾನರರಿಂದ ಶ್ರದ್ಧಾವಾನರಿಗಾಗಿರುವುದು. ಪ್ರಾರಂಭದಲ್ಲಿ, ಎರಡು ಮೂರು ವಾರಗಳ ಅವಧಿಯಲ್ಲಿ ಅನಿರುದ್ಧಾ ಪ್ರೇಮಸಾಗರ ಚ್ಯಾನೆಲಿನಲ್ಲಿ ನಾವು ೧೫೦ ವಿಡಿಯೋಗಳನ್ನು ಅಪ್ ಲೋಡ್ ಮಾಡಿ ಅದರಲ್ಲಿ ಪರಮ ಪೂಜ್ಯ ಬಾಪೂರವರ ಕೆಲವಾರು ಸಂದರ್ಭಗಳಲ್ಲಿ, ಅಂದರೆ ದೊಡ್ಡ ಕಾರ್ಯಕ್ರಮಗಳಂತಹ ರಾಮನವಮಿ, ಗುರುಪೂರ್ಣಿಮೆ, ಅನಿರುದ್ಧ ಪೂರ್ಣಿಮ ಇತ್ಯಾದಿ, ಹಾಗೆಯೇ ಶ್ರದ್ಧಾವಾನರು ಆಚರಿಸುವತ್ತಿರುವ ಪಾದುಕಾ ಪೂಜನೆ, ಸಚ್ಚಿದಾನಂದ ಆನಂದೋತ್ಸವ, ಕಂಠಕೂಪ ಪಾಷಾಣ ಪೂಜೆ (೨೦೦೩) ಮತ್ತು ಧರ್ಮಚಕ್ರ ಪೂಜನೆ (೧೯೯೯) ಅದಲ್ಲದೆ ಇದರ ಮೊದಲು ಮಾಡಿರುವ ಹಲವಾರು ಕಾರ್ಯಕ್ರಮಗಳು, ಅದರಂತೆ ಅನಿರುದ್ಧ ಚಲಿಸದ ಸ್ಲೈಡ್ ಶೋಜ್, ಪಿಪಾಸದ ಅಭಂಗಗಳು,  ತನ್ನ ಮಿತ್ರರ ಹಾಗು ಶ್ರದ್ಧಾವಾನರ ಕೆಲವು ಕೌಟುಂಬಿಕ ಸಮಾರಂಭಗಳಿಗೆ ಬಾಪೂರವರು  ಬಂದು ಗೌರವಿಸಿದ್ದು ಮೊದಲಾದವುಗಳು ಇರುವವು. ಶ್ರದ್ಧಾವಾನರು ಮೇಲೆ ಹೇಳಿರುವ ದೊಡ್ಡ ಕಾರ್ಯಕ್ರಮಗಳ ಹಾಗು ಪಾದುಕಾ ಪೂಜನೆಯ ಆಚರಣೆಯ ವಿಡಿಯೋ ಫೂಟೇಜ್ ಅಥವಾ ಸ್ಲೈಡ್ ಶೋಜ್ ಅವರಲ್ಲಿದ್ದರೆ ಅದನ್ನು ನೇರವಾಗಿ aniruddhapremsagara@gmail.com ಗೆ ಕಳುಹಿಸಬಹುದು ಅಥವಾ ನೀವು ವಿಡಿಯೋಗಳನ್ನು ನಮಗೆ www.dropbox.com, Google Drive – www.google.com/drive ಅಥವಾ ಇನ್ನಿತರ ಸಂಬಂಧಿತ ಸೈಟ್ ಗಳ ಮೂಲಕ ಕಳುಹಿಸಬಹುದು. ಆದರೆ ಈ ಫೂಟೇಜಿನ ಕಾಲಾವಧಿ ಐದು ನಿಮಿಷಗಳ ಮೇಲಿರಬಾರದೆಂದು ಗಮನದಲ್ಲಿಡಬೇಕು. ಅದಾಗದಿದ್ದರೆ ಈ ವಿಡಿಯೋಗಳ ಸೀಡಿಯನ್ನು ಶ್ರೀ ಹರಿಗುರುಗ್ರಾಮದಲ್ಲಿ ಗುರುವಾರದಂದು ಅಥವಾ ಹ್ಯಾಪ್ಪಿ ಹೋಮ್ ನ ಎರಡನೆಯ ಮಾಳಿಗೆಯಲ್ಲಿಯ ಗುಣಸಂಕೀರ್ತನದ ವಿಭಾಗದಲ್ಲಿ ತಂದು ಕೊಡಬಹುದು.

Monday, 4 March 2013

ನಾನು ಅನಿರುದ್ಧನಿದ್ದೇನೆ


ತನ್ನ ಐವತ್ತನೇಯ ಜನ್ಮದಿವಸದ ಅವಸರದಂದು ಪ್ರಕಾಶಿತವಾಗುವ ದೈನಿಕದ ವಿಶೇಷ ಆವೃತ್ತಿಯ ಅಗ್ರಲೇಖ ಹಾಗು ತನ್ನದೇ ವಿಷಯದಲ್ಲಿ ಬರೆಯುವ, ಬಹುಶಃ ನಾನು ಏಕಮೇವ ಕಾರ್ಯಕಾರೀ ಸಂಪಾದಕನಾಗಿರಬೇಕು. ನನ್ನ ಮಾಯೀ ನನ್ನ ಬಾಲ್ಯದಿಂದಲೂ ಅನೇಕವೇಳೆ, "ಇವನು ಏನು ಮಾಡುವನೊ, ಯಾವತ್ತು ತಿಳಿಯುವುದಿಲ್ಲ" ಯೆಂದು ಹೇಳುತ್ತಿದ್ದಳು.  ಆದರೆ ನನ್ನ ತಾಯೀ ನನಗೆ "ಚಕ್ರಮಾದಿತ್ಯ ಚಮತ್ಕಾರ" ಅನ್ನುತಿದ್ದಳು. ಬಹುಶಃ ನನ್ನ ಬಾಲ್ಯಕಾಲದ ಆ ವಿಚಿತ್ರ ಸ್ವಭಾವದ ವಿಕಾಸ ಸದಾ ಆಗುತ್ತಿರಬೇಕು. ಪ್ರತಿಯೊಬ್ಬನಿಗೂ ಶಾಲೆಯ ಶಿಕ್ಷಣ ಮುಗಿಸಿದ ನಂತರ ಒಂದು ವೇಳೆ ಯಾವುದೇ ಮಗ್ಗಿ ಮರೆತರೂ ಸಹ "ನಾನೊಂದಲೆ ನಾನು ರಿಂದ ಹಿಡಿದು ನಾನ್ಹತ್ಲೇ ನಾನು"  ಈ ಮಗ್ಗಿಯು ಸಹಜವಾಗಿ ಬರುತ್ತದೆ ಕಾರಣ ಈ "ಅಹಂ" ಹತ್ತು ದಿಕ್ಕುಗಳಲ್ಲಿ ಮನಸ್ಸಿನ ಕುದುರೆಯ ಮೇಲೆರಿಸಿ ಬೇಕಾಗಿರುವಾಗ ಬೇಕಾದಂತೆ  ಬಳಸಬಲ್ಲನು. ನಾನು ಹೀಗಿರುವೆನು ಮತ್ತು ನಾನು ಹಾಗಿರುವೆನು, ನಾನೇನು ಹೀಗಿಲ್ಲ ಮತ್ತು ನಾನೇನು ಹಾಗಿಲ್ಲ, ನನಗೆ ಇದು ಬೇಕು ಮತ್ತು ನನಗೆ ಅದು ಬೇಡಾ, ನಾನು ಇದನ್ನು ಮಾಡಿರುವೆನು ಮತ್ತು ನಾನು ಅದನ್ನು ಮಾಡಿರುವೆನು, ಹೀಗೆ ಅನೇಕ ರೂಪಗಳಲ್ಲಿ ಪ್ರತಿಯೊಬ್ಬನ ಈ "ಅಹಂ" ಜೀವನಪೂರ್ತಿ ಆಟಾಡವಾಡುತಿರುವದು. ಈ ಅನಿರುದ್ಧನಾದರು ಸಣ್ಣ ಮಕ್ಕಳ "ಧಾಂಗಡಧಿಂಗಾ" ಶಿಬಿರದ ಪ್ರಬಲ ಸಮರ್ಥಕನಾಗಿರುವೆನು.  ಹೀಗಿರುವಾಗ ಈ ಅನಿರುದ್ಧನ "ಅಹಂ" ಶಾಂತವಾಗಿ ಕೂಡಲೂ ಸಾಧ್ಯವೇ? 


ನಾನು ಹೀಗಿರುವೆನು ಮತ್ತು ನಾನು ಹಾಗಿರುವೆನು - ನಾನು ಹೇಗಿರುವೆನು ಅದು ಕೇವಲ ನನಗೆ ತಿಳಿದಿರುವುದು. ಆದರೆ ನಾನು ಹೇಗೆ ಇರುವುದಿಲ್ಲವೆಂಬುವುದು ಮಾತ್ರ ನನಗೆ ಗೊತ್ತಿಲ್ಲ. ನಾನು ಹೇಗಿರುವೆನು? ಅದು ನನ್ನ ಆ ಸನ್ನಿವೇಶದಲ್ಲಿ ಅಸ್ತಿತ್ವವಾಗಿದ್ದ ಆ ಮಾನವನನ್ನು ಅವಲಂಬಿಸಿರುವುದಿಲ್ಲ, ಆ ಪರಿಸ್ಥಿತಿಮೇಲೆ ಸಹ ಅವಲಂಬಿತವಾಗಿಲ್ಲ. ಪಕ್ಕದ ಮನುಷ್ಯನು ಮತ್ತು ಪರಿಸ್ಥಿತಿಯು ಯಾವುದೇ ಪ್ರಕಾರದಾಗಿರಲಿ, ನಾನು ಮಾತ್ರ ಹಾಗೆಯೇ ಇರುವೆನು ಕಾರಣ ನಾನು ಸದಾ ವರ್ತಮಾನಕಾಲದಲ್ಲಿಯೇ ಸಂಚರಿಸುವೆನು ಮತ್ತು ವಾಸ್ತವತೆಯ ಅರಿವನ್ನು ಎಂದಿಗೂ ಬಿಟ್ಟುಬಿಡುವುದಿಲ್ಲ. ಭೂತಕಾಲದ ಅರಿವು ಹಾಗು ಸ್ಮೃತಿ ವರ್ತಮಾನಕಾಲದಲ್ಲಿ ಅಧಿಕಾಧಿಕ ಜಾಗರೂಕತೆಯಾಗಿರಲು ಮತ್ತು ಭವಿಷ್ಯಕಾಲದ ಮುನ್ಸೊಚನೆಯು ವರ್ತಮಾನಕಾಲದಲ್ಲಿ ಎಚ್ಚರಿಕೆಯಿಂದಿರಲು ಮಾತ್ರ, ಇದು ನನ್ನ ವೃತ್ತಿ.

ನಾನು ಒಳ್ಳೆಯವನು ಅಥವಾ ಕೆಟ್ಟವನು- ಇದನ್ನು ತೀರ್ಮಾನಿಸುವ ಅಧಿಕಾರವನ್ನು ಸಂಪೂರ್ಣವಾಗಿ ನಾನು ಇಡೀ ಜಗತ್ತಿಗೆ ಕೊಟ್ಟಿರುವೆನು ಕಾರಣ ಇತರ ಯಾರೇ  ಆಗಲಿ ನನ್ನನ್ನು ಏನೇ ಅಂದರು ಅದಕ್ಕೆ ನಾನು ಗಮನ ನೀಡುವುದಿಲ್ಲ. ಕೇವಲ ನನ್ನ ದತ್ತಗುರು ಹಾಗು ನನ್ನ ಗಾಯತ್ರಿಮಾತೆಯವರಿಗೆ ಇಷ್ಟಪಡುವ ರೀತಿಯಲ್ಲಿ ಇರಬೇಕು ಎಂಬುವುದೇ ನನ್ನ ಜೀವನದ ಏಕಮೇವ ಉದ್ದೇಶವಿದೆ ಮತ್ತು ಅವರದೇ ವಾತ್ಸಲ್ಯದಿಂದ ಅವರು ಬಯಸಿದಂತೆ ನಾನು ರೂಪಗೊಳ್ಳುವೆನು.   

ನಾನೇನು ಹೀಗಿಲ್ಲ ಮತ್ತು ನಾನೇನು ಹಾಗಿಲ್ಲ - ನಾನು ಹೇಗೆ, ಎಲ್ಲಿ ಮತ್ತು ಯಾವಾಗ ಇರುವುದಿಲ್ಲವೆಂಬುದು ಮಾತ್ರ ನನಗೆ ನಿಜವಾಗ್ಲೂ ಗೊತ್ತಿಲ್ಲ ಆದರೆ ನಾನು ಯಾವುದರಲ್ಲಿ ಇಲ್ಲ ಎಂಬುದು ನನಗೆ ಚೆನ್ನಾಗಿ ತಿಳಿದಿದೆ ಮತ್ತು ಇದುವೇ ನನ್ನ ಪ್ರತಿಯೊಂದು ಹಾದಿಯ ಪ್ರಕಾಶ.     

ನನಗೆ ಇದು ಬೇಕು ಮತ್ತು ನನಗೆ ಅದು ಬೇಡ - ನನಗೆ ಭಕ್ತಕಾರಣ ಬೇಕು ಮತ್ತು ರಾಜಕಾರಣ ಬೇಡಾ, ನನಗೆ ಸೇವೆಯನ್ನು ಸಲ್ಲಿಸುವುದು ಬೇಕು ಆದರೆ ಯಾವುದೇ  ಸ್ಥಾನ ಬೇಡ, ನನಗೆ ಮಿತ್ರರ ಪ್ರೀತಿಯ ಸಿಂಹಾಸನ ಬೇಕು ಆದರೆ ಆಳ್ವಿಕೆ ಬೇಡ, ನನಗೆ ಅಹಿಂಸೆ ಬೇಕು ಆದರೆ ದುರ್ಬಲತೆ ಬೇಡ, ನನಗೆ ಸರ್ವಸಮರ್ಥತೆ ಬೇಕು ಆದರೆ ಅತ್ಯಾಚಾರ ಬೇಡ, ಬಲ ಬೇಕು ಆದರೆ ಹಿಂಸೆಯು ಬೇಡ, ನಾನು ಪರಮೇಶ್ವರನ ಪ್ರತ್ಯೇಕ ಭಕ್ತನ ದಾಸ್ಯತ್ವ ಸ್ವೀಕರಿಸಲು ಉತ್ಸುಕನಾಗಿರುವೆನು ಆದರೆ ದಾಂಭಿಕ ಮೋಸಗಾರಿಕೆ ಮತ್ತು ಮೂಢನಂಬಿಕೆಗಳ ನಾಯಕತ್ವ ಬೇಡ.   

ಅನೇಕರಿಗೆ ನಾನು ಯಾರಿಗೂ ಭೇಟಿಯಾಗಲು ಹೋಗುದಿಲ್ಲವೆಂದು ಕೋಪ ಬರುತ್ತದೆ ಆದರೆ ನನಗೆ ಯಾರಿಂದಲೂ ಏನು ಸ್ವೀಕರಿಸುವುದಿರುವುದಿಲ್ಲ  ಹಾಗೆಯೇ ಯಾರಿಗೂ ಏನು ನೀಡುವುದಿರುವುದಿಲ್ಲ. ಆಗ ಯಾರಿಗೂ ಭೇಟಿಯಾಗುವ ಪ್ರಶ್ನೆ ಎಲ್ಲಿ ಉದ್ಭವಿಸುತದೆ? ನಾನು ನನ್ನ ಮಿತ್ರರಿಗೆ ಮಾತ್ರ ಬೇಟಿಯಾಗುವೆನು ಕಾರಣ "ಆಪ್ತಸಂಬಂಧ" ಅಂದರೆ ಲೇವಾ-ದೇವಿವಲ್ಲದ ಏಕಮೇವ ಒಲುಮೆಯ ಭೇಟಿಯೇ ಕಾರಣವಾಗಿರುತ್ತದೆ, ಆದ್ದರಿಂದ ನಾನು ಬಡ್ಡಿರಹಿತ ಭೇಟಿಯನ್ನು ಬಯಸುತ್ತೆನೆ, ಆದರೆ ಲೇಣಿ-ದೇಣಿ ಅಥವಾ ವಿಚಾರಮಂಥನದ ಭೇಟಿಯು ಬಯಸುವುದಿಲ್ಲ.

ನನಗೆ ಜ್ಞಾನ ಬೇಡ ಅಂದರೆ ಜ್ಞಾನದ ಕಾರ್ಯಶೂನ್ಯ ಶಬ್ದಗಳು ಮತ್ತು ಪ್ರದರ್ಶನ ಬೇಡವಾಗುವುದು ಆದರೆ ನನಗೆ ಪರಿಶ್ರಮಪೂರ್ವಕ ಜ್ಞಾನದ ಸೃಜನಾತ್ಮಕ ಕಾರ್ಯಕ್ಕಾಗಿ ನಿಸ್ವಾರ್ಥ ಬಳಕೆಯು ಅಗತ್ಯವಾಗಿದೆ.

ನಾನು ಇದನ್ನು ಮಾಡಿದೆನು ಮತ್ತು ನಾನು ಅದನ್ನು ಮಾಡಿದೆನು - "ನಾನು ಏನೂ ಮಾಡುವುದಿಲ್ಲ, ಅಥವಾ ನಾನು ಯಾವತ್ತಿಗೂ ಎಲ್ಲವನ್ನು ಮಾಡುತ್ತಿರುವುದಿಲ್ಲ" ಇದು ನನ್ನ ಅಂತಿಮ ಶ್ರದ್ಧೆಯಿರುವುದು.  ಆಗ ಈ ನನ್ನ "ಅಹಂ" ಸ್ವಸ್ಥವಾಗಿ ಕುಳಿತು ನಿಷ್ಕ್ರಿಯವಿರುವುದೇ? ಅದಂತು ಸಾಧ್ಯವೇ ಇಲ್ಲ. ಈ ಅನಿರುದ್ಧನ "ಅಹಂ" ಆ "ಅಹಂ ಇಲ್ಲದ" ಪ್ರತ್ಯೇಕ ಶ್ರದ್ಧಾವಾನನ ಜೀವನಪ್ರವಾಹವನ್ನು ಗಮನಿಸುತ್ತಿರುವನು ಮತ್ತು ಆ ಪ್ರವಾಹದ ವೇಗ ನಿಲ್ಲುವುದಿಲ್ಲ ಹಾಗು ಪಾತ್ರ ಒಣಗುವುದಿಲ್ಲ, ಎಂಬುದರ ಕಾಳಜಿವಹಿಸಲು  "ಅಹಂ ಇಲ್ಲದ" ಉಗಮ ಅವನದೇ ಪ್ರೇಮದಿಂದ ಶ್ರದ್ಧಾವಾನನ ಜೀವನನದಿಯಲ್ಲಿನ ಎಲ್ಲಾ ಅಡೆತಡೆಗಳನ್ನು ದೂರ ಮಾಡುತ್ತಾ ಸತತವಾಗಿ ಹರಿಯುತ್ತಿರಲು ಸುರಿಯುತ್ತಿರುವೆನು. ನನಗೆ ಹೇಳಿ, ಇದರಲ್ಲಿ ನನ್ನದೇನಿದೆ?

ನಾನು ಸತ್ಯ, ಪ್ರೇಮ ಮತ್ತು ಆನಂದ ಈ ಮೂರು ಮೂಲಭೂತ ಗುಣಗಳನ್ನು ಅತ್ಯಂತ ಮೆಚ್ಚುವೆನು ಆದುದ್ದರಿಂದ ಅಸತ್ಯ, ದ್ವೇಷ ಮತ್ತು ದುಃಖ ಇವುಗಳ ವಿರೋಧ ನನ್ನ ನೈಸರ್ಗಿಕ ಗುಣಧರ್ಮವಾಗಿದೆ; ಇದರರ್ಥ, ಈ ಕಾರ್ಯವು ತನ್ನಿಂದ ತಾನೆ ಕಾರ್ಯಗತವಾಗಿದೆ. ಕಾರಣ ಯಾವ ಸ್ವಭಾವವಿರುವುದೋ ಅದು ತನ್ನಿಂದ ತಾನೆ ಕಾರ್ಯಗತವಾಗುತ್ತದೆ, ಅದಕ್ಕೊಸ್ಕರ ಬೇಕೆಂದಲೇ ಏನು ಮಾಡುವ ಆವಶ್ಯಕತೆಯು ಇರುವುದಿಲ್ಲ.

ಪ್ರಭುರಾಮಚಂದ್ರರ ಮರ್ಯಾದಾಯೋಗ, ಭಗವಾನ ಶ್ರೀಕೃಷ್ಣರ ನಿಷ್ಕಾಮ ಕರ್ಮಯೋಗ ಮತ್ತು ಶ್ರೀಸಾಯೀನಾಥರ ಮರ್ಯಾದಾಧಿಷ್ಠಿತ ಭಕ್ತಿಯೋಗ ಇವು ನನ್ನ ಆದರ್ಶವಾಗಿವೆ. ನಾನು ಸ್ಥಿತಪ್ರಜ್ಞನಲ್ಲ, ನಾನು ಪ್ರೇಮಪ್ರಜ್ಞನಾಗಿರುವೆನು. ನಾನು "ವಾಸ್ತವತೆಯ" ಅಂದರೆ ಸ್ಥೂಲ ಸತ್ಯದೊಂದಿಗೆ ಬದ್ಧನಾಗದೆ ಯಾವುದರಲ್ಲಿ ಪಾವಿತ್ರ್ಯ ಉತ್ಪನ್ನವಾಗುವುದು ಅಂತಃ ಮೂಲಭೂತ ಸತ್ಯದೊಂದಿಗೆ ಬದ್ಧನಾಗಿರುವೆನು.                   

ನಾನು ಏನು ಮಾಡಬೇಕೆಂದು ಬಯಸುತ್ತೆನೆ? ನಾನು ಏನು ಮಾಡಲು ಹೋಗುತಿದ್ದೆನೆ? ನನ್ನ ಅಗ್ರಲೇಖ ಬರೆಯುವ ಕಾರಣವೇನಿದೆ? ನಾನು ಮೂರನೆ ವಿಶ್ವ ಮಹಾಯುಧ್ದದ ವಿಷಯದಲ್ಲಿ ಅಷ್ಟೊಂದು ಬರೆಯುವ ಕಾರಣವೇನಿದೆ? ನಾನು ಪ್ರವಚನ ಮಾಡುವುದು ಏತಕ್ಕಾಗಿ? ಇವುಗಳ ಉತ್ತರ ನನ್ನ ಹೃದಯಕ್ರಿಯೆ ಹೇಗೆ ನಡೆಯುತ್ತದೆ ಮತ್ತು ನಾನು ಉಸಿರಾಡುವಿಕೆ ಹೇಗೆ ಮಾಡುವೆನು ಅಷ್ಟೇ ಸುಲಭವಾಗಿದೆ, ನಿಜವೆಂದರೆ ಅದುವೇ ಉತ್ತರವಾಗಿದೆ.  

ನನ್ನ ಸ್ನೇಹಿತರೆ, ಕೇವಲ ಪವಿತ್ರತೆ ಮತ್ತು ಪ್ರೇಮ ಎಂಬ ಎರಡು ನಾಣ್ಯಗಳಿಗೆ ನಾನು ಒಲೆಯುವೆನು, ಇತರ ಯಾವುದೇ ಚಲನ ನನ್ನನ್ನು ಖರೀದಿಸಲು ಸಾಧ್ಯವಿಲ್ಲ. ನಿಜವೆಂದರೆ, ಈ ಅನಿರುದ್ಧನ "ಅಹಂ" ಕೇವಲ ನಿಮ್ಮದೇ ಆಗಿದೆ, ಅದು ಎಂದಿಗೂ ನನ್ನದಾಗಿರಲಿಲ್ಲ ಮತ್ತು ಎಂದಿಗೂ ನನ್ನದಾಗುವುದಿಲ್ಲ.

ಮಿತ್ರರ ಮಿತ್ರ,
ಅನಿರುದ್ಧ.